ನವದೆಹಲಿ, ನ 25 (DaijiworldNews/HR): ಆಸ್ಟ್ರೇಲಿಯಾದಲ್ಲಿ ನಾಲ್ಕು ವರ್ಷಗಳ ಹಿಂದೆ ಮಹಿಳೆಯೊಬ್ಬರನ್ನು ಕೊಂದು ಅಲ್ಲಿಂದ ಪರಾರಿಯಾಗಿದ್ದ ಭಾರತೀಯ ಮೂಲದ ಆಸ್ಟ್ರೇಲಿಯಾದ ಪ್ರಜೆಯನ್ನು ದೆಹಲಿಯಲ್ಲಿ ಬಂಧಿಸಲಾಗಿದೆ.
ಬಂಧಿತನನ್ನು ರಾಜ್ವಿಂದರ್ ಸಿಂಗ್ ಎಂದು ಗುರುತಿಸಲಾಗಿದೆ.
ರಾಜ್ವಿಂದರ್ ಸಿಂಗ್ ನ ಬಂಧನಕ್ಕೆ ಆಸ್ಟ್ರೇಲಿಯಾ ಪೊಲೀಸರು1 ಮಿಲಿಯನ್ ಆಸ್ಟ್ರೇಲಿಯನ್ ಡಾಲರ್ ಬಹುಮಾನ ಘೋಷಿಸಿದ್ದರು.
ಇನ್ನು 2018ರಲ್ಲಿ ಕ್ವೀನ್ಸ್ ಲ್ಯಾಂಡ್ ಬೀಚ್ ನಲ್ಲಿ 24 ವರ್ಷದ ಆಸ್ಟ್ರೇಲಿಯನ್ ಪ್ರಜೆ ತೊಯಾ ಕಾರ್ಡಿಂಗ್ಲೆ ಎಂಬವರನ್ನು ಹತ್ಯೆಗೈದ ಆರೋಪ ಎದುರಿಸುತ್ತಿದ್ದಾರೆ. ನಂತರ ಭಾರತಕ್ಕೆ ಪರಾರಿಯಾಗಿದ್ದ.