ನವದೆಹಲಿ, ನ 25 (DaijiworldNews/DB): ಟಿಆರ್ಎಸ್ ಶಾಸಕರ ಖರೀದಿ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ನೀಡಲಾದ ಎಸ್ಐಟಿ ನೋಟಿಸ್ ವಿರುದ್ದ ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ಎಸ್ಐಟಿಯ ಸೆಕ್ಷನ್ 41 ಎ ಸಿಆರ್ಪಿಸಿ ಅಡಿಯಲ್ಲಿ ಬಿ.ಎಲ್. ಸಂತೋಷ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಇದೀಗ ಅವರು ಇದರ ವಿರುದ್ದ ತೆಲಂಗಾಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಈ ಹಿಂದೆ ನವೆಂಬರ್ 21ರಂದು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು. ಆದರೆ ಅಂದು ಪೂರ್ವನಿರ್ಧರಿತ ಕಾರ್ಯಕ್ರಮಗಳಿರುವುದರಿಂದ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡುವಂತೆ ಕೋರಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನವೆಂಬರ್ 29ಕ್ಕೆ ಮುಂದೂಡಲಾಗಿತ್ತು. ಅಲ್ಲದೆ ಮತ್ತೆ ಅವರಿಗೆ ನೋಟಿಸ್ ನೀಡುವಂತೆ ಎಸ್ಐಟಿಗೆ ಕೋರ್ಟ್ ತಿಳಿಸಿತ್ತು.