ಬೆಂಗಳೂರು, ನ 25 (DaijiworldNews/MS): ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗೆ ಅರ್ಜಿ ಹಾಕಲು ವಿದ್ಯಾರ್ಥಿಗಳು ಇನ್ನು ಮುಂದೆ ಕಷ್ಟ ಪಡುವ ಅಗತ್ಯ ಇಲ್ಲ. ಅರ್ಜಿ ಸಲ್ಲಿಸುವಾಗ ಶಾಲಾ ಶಿಕ್ಷಣ ಇಲಾಖೆಯ ಸ್ಯಾಟ್ಸ್ ಮಾಹಿತಿಯಿಂದ ಕೆಇಎ ಬೋರ್ಡ್ಗೆ ಮಾಹಿತಿ ಕೊಡಲಾಗುತ್ತದೆ ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಜಂಟಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದರು.
" ಇಂದು ಸಭೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಜಾರಿ ಮಾಡಲಾಗುತ್ತದೆ . ಹೀಗಾಗಿ ವಿದ್ಯಾರ್ಥಿಗಳು ಅರ್ಜಿ ಹಾಕಲು ಕಷ್ಟ ಪಡುವ ಅಗತ್ಯ ಇಲ್ಲ" ಎಂದು ಸಚಿವ ನಾಗೇಶ್ ತಿಳಿಸಿದ್ದಾರೆ.
ಡಾ. ಅಶ್ವಥ್ ನಾರಾಯಣ ಮಾತನಾಡಿ, " ಸಿಇಟಿ ಅರ್ಜಿ ಹಾಕುವಾಗ ವಿದ್ಯಾರ್ಥಿಗಳು ತಪ್ಪು ಮಾಹಿತಿಗಳನ್ನು ಹಾಕುತ್ತಿದ್ದರು. ಶಾಲಾ ಶಿಕ್ಷಣ ಇಲಾಖೆಯಲ್ಲಿ ಎಸ್ಎಸ್ಎಲ್ಸಿಯಲ್ಲಿ ಇರುವಾಗಲೇ ವಿದ್ಯಾರ್ಥಿಗಳ ಮಾಹಿತಿ ಇರಲಿದೆ. ಹೀಗಾಗಿ ದಾಖಲಾತಿ ಪರಿಶೀಲನೆ, ಅರ್ಜಿ ಸಲ್ಲಿಕೆ ಇದೆಲ್ಲವನ್ನೂ ಇಲಾಖೆಯಿಂದ ನೇರವಾಗಿ ತೆಗೆದುಕೊಳ್ಳಲು ನಿರ್ಧಾರ ಮಾಡಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಸ್ಯಾಟ್ಸ್ ಮಾಹಿತಿಯಿಂದ ನಾವು ಮಾಹಿತಿ ಪಡೆದುಕೊಳ್ಳುತ್ತೇವೆ. ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದಂತೆ ಪ್ರಕ್ರಿಯೆ ಮಾಡುತ್ತೇವೆ. ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಟ್ರೈನಿಂಗ್ ಕೊಡಲು ಮಾಸ್ಟರ್ ಟ್ರೈನರ್ಸ್ಗಳನ್ನು ನೇಮಕ ಮಾಡಿ, ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಟ್ರೈನಿಂಗ್ ಕೊಡಲು ಮಾಸ್ಟರ್ ಟ್ರೈನರ್ಸ್ಗಳನ್ನು ನೇಮಕ ಮಾಡಲಾಗುತ್ತದೆ" ಎಂದು ಮಾಹಿತಿ ನೀಡಿದ್ದಾರೆ.