ಮುಂಬೈ, ನ 26 (DaijiworldNews/HR): ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ದ ಮಾತನಾಡುವ ಧೈರ್ಯ ನಮ್ಮ ಮುಖ್ಯಮಂತ್ರಿಗಳಿಗೆ ಇಲ್ಲ ಎಂದು ಮಹರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಟೀಕಿಸಿದ್ದಾರೆ.
ಮಹರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದದ ದಿನದಿಂದ ದಿನಕ್ಕೆ ಹೆಚ್ಚತ್ತಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಠಾಕ್ರೆ, ಮಹಾರಾಷ್ಟ್ರದ ಹಲವು ಗ್ರಾಮಗಳು ತಮ್ಮ ರಾಜ್ಯದ ಭಾಗವೆಂಬ ಕರ್ನಾಟಕದ ರಾಜಕಾರಣಿಗಳ ಹೇಳಿಕೆಯನ್ನ ಗಮನಿಸಿದ್ದೇನೆ, ಅವರ ಹೇಳಿಕೆಯನ್ನ ನಾನು ಖಂಡಿಸುತ್ತೇನೆ. ಮಹಾರಾಷ್ಟ್ರದ ಭಾಗಗಳು ಕರ್ನಾಟಕಕ್ಕೆ ಸೇರಬೇಕೆಂದು ಹೇಳುತ್ತಿರಬಹುದು ಅಥವಾ ಕೇಂದ್ರ ಸರ್ಕಾರವು ಇದೇ ನಿಲುವನ್ನು ಹೊಂದಿರಬಹುದಾ ಎಂದು ಏಕನಾಥ್ ಶಿಂಧೆ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಇನ್ನು ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಯಲ್ಲಿನ ಗ್ರಾಮಗಳನ್ನು ನಮ್ಮ ವಶಕ್ಕೆ ಪಡೆಯುತ್ತೇವೆ. ಮಹಾರಾಷ್ಟ್ರಕ್ಕೆ ಸೇರಬೇಕಾದ ಒಂದೇ ಒಂದು ಗ್ರಾಮವನ್ನು ಬಿಟ್ಟುಕೊಡುವುದಿಲ್ಲ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.