ನವದೆಹಲಿ, ನ 26 (DaijiworldNews/HR): ಜೈಲಿನಲ್ಲಿ ವಿಶೇಷ ಆಹಾರ ನೀಡುವಂತೆ ಕೋರಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸತ್ಯೇಂದ್ರ ಜೈನ್ ಸಲ್ಲಿಸಿದ್ದ ಮನವಿಯನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.
ಜೈಲಿನಲ್ಲಿ ಹಣ್ಣುಗಳು ಮತ್ತು ಒಣ ಹಣ್ಣುಗಳನ್ನು (ಡ್ರೈ ಫ್ರೂಟ್ಸ್) ಪಡೆಯಲು ಜೈನ್ ಅವರ ಮನವಿಯನ್ನು ವಿಶೇಷ ನ್ಯಾಯಾಧೀಶ ವಿಕಾಸ್ ಧಾಲ್ ವಜಾಗೊಳಿಸಿದ್ದಾರೆ.
ಇನ್ನು ದೇವಸ್ಥಾನಕ್ಕೆ ಹೋಗದೆ ಸಾಮಾನ್ಯವಾಗಿ ಆಹಾರ ಸೇವಿಸುವುದಿಲ್ಲ. ಹಣ್ಣುಗಳು ಮತ್ತು ಸಲಾಡ್ಗಳ ಡಯಟ್ ನಲ್ಲಿದ್ದೇನೆ ಎಂದು ಎಎಪಿ ನಾಯಕ ಮನವಿಯಲ್ಲಿ ಹೇಳಿದ್ದಾರೆ.
ಮೇ ತಿಂಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದ ನಂತರ ಜೈನ್ ಅವರು ತಿಹಾರ್ ಜೈಲಿನಲ್ಲಿ ಇದ್ದಾರೆ.