ಬೆಳಗಾವಿ, ನ 27 (DaijiworldNews/HR): ಕರ್ನಾಟಕ ಮಹಾರಾಷ್ಟ್ರದ ಗಡಿಯಲ್ಲಿರುವ ಕಿತವಾಡ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಕಾಲು ಜಾರಿ ಬಿದ್ದು, ನೀರಿನಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿನಿಯರು ಸಾವನ್ನಪ್ಪಿರುವ ಘಟನೆ ನಡೆದಿದೆ.
ನಾಲ್ವರು ಯುವತಿಯರು ಬೆಳಗಾವಿಯ ಕಾಮತ್ ಗಲ್ಲಿಯಲ್ಲಿರುವ ಮದರಸಾಗೆ ಸೇರಿದರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಶನಿವಾರ ಬೆಳಿಗ್ಗೆ ಕಿತವಾಡ ಫಾಲ್ಸ್ ನೋಡಲು ಸುಮಾರು 40 ವಿದ್ಯಾರ್ಥಿನಿಯರು ತೆರಳಿದ್ದು, ಈ ವೇಳೆ ಸೆಲ್ಫಿ ಕ್ಲಿಕ್ಕಿಸಲು ಪ್ರಯತ್ನಿಸುತ್ತಿರುವಾಗ ಐವರು ಯುವತಿಯರು ಫಾಲ್ಸ್ಗೆ ಜಾರಿ ಬಿದ್ದಿದ್ದಾರೆ.
ಐವರಲ್ಲಿ ಒಬ್ಬರನ್ನು ಸ್ಥಳೀಯ ಯುವಕರು ರಕ್ಷಿಸಿ, ತಕ್ಷಣವೇ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕಳುಹಿಸಲಾಗಿದೆ. ಆದರೆ ಉಳಿದ ನಾಲ್ಕು ಯುವತಿಯರು ಮೃತಪಟ್ಟಿದ್ದಾರೆ.