ಬೆಂಗಳೂರು, ನ 27 (DaijiworldNews/SM): ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಭೆ ನಡೆಸಿದ್ದಾರೆ.
ಇದೇ ತಿಂಗಳ 30ರಂದು ಮಹಾರಾಷ್ಟ್ರ ಸರಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಬರಲಿದೆ. ಈ ಬಗ್ಗೆ ಸಭೆ ನಡೆಸಿದ ಸಿಎಂ ಮುಂದೆ ಪ್ರಕಟಗೊಳ್ಳುವ ನಿರ್ಧಾರದ ಬಳಿಕ ಯಾವ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಚರ್ಚಿಸಿದರು.