ನವದೆಹಲಿ, ನ 28 (DaijiworldNews/HR): ಶ್ರದ್ಧಾ ವಾಕರ್ ಹತ್ಯೆಯ ಭೀಕರ ಘಟನೆ ಮಾಸುವ ಮುನ್ನವೇ ದೆಹಲಿಯಲ್ಲಿ ಇದೇ ರೀತಿಯ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ಮಹಿಳೆ ಮತ್ತು ಆಕೆಯ ಮಗ ಸೇರಿ ವ್ಯಕ್ತಿಯೊಬ್ಬನನ್ನು ಕೊಂದು, ದೇಹವನ್ನು ಕತ್ತರಿಸಿ, ರೆಫ್ರಿಜರೇಟರ್ನಲ್ಲಿ ಶೇಖರಿಸಿಟ್ಟಿದ್ದು, ಬಳಿಕ ದೇಹದ ಭಾಗಗಳನ್ನು ಪೂರ್ವ ದೆಹಲಿ ನೆರೆಹೊರೆಗಳಲ್ಲಿ ವಿಲೇವಾರಿ ಮಾಡಿರುವ ಆರೋಪದ ಮೇಲೆ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ ಪೂನಂ ಮತ್ತು ಆಕೆಯ ಮಗ ದೀಪಕ್ ಜೂನ್ ನಲ್ಲಿ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪಾಂಡವನಗರ ನಿವಾಸಿ ಅಂಜನ್ ದಾಸ್ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ದಾಸ್ ಅವರಿಗೆ ಮೊದಲು ನಿದ್ರೆ ಮಾತ್ರೆಗಳನ್ನು ನೀಡಿ ನಂತರ ಕೊಲೆ ಮಾಡಿ ಬಳಿಕ ಆತನ ದೇಹವನ್ನು ಕತ್ತರಿಸಿ, ರೆಫ್ರಿಜರೇಟರ್ನಲ್ಲಿ ತುಂಡುಗಳನ್ನು ಸಂಗ್ರಹಿಸಿ ಪಾಂಡವ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಸೆದಿದ್ದಾರೆ.
ನೆರೆಹೊರೆಯಲ್ಲಿನ ಸಿಸಿಟಿವಿ ಕ್ಯಾಮೆರಾಗಳಿಂದ ಆಘಾತಕಾರಿ ದೃಶ್ಯಾವಳಿಗಳು ಕಂಡುಬಂದಿದ್ದು, ವಿಡಿಯೋಗಳು ದೀಪಕ್ ತಡರಾತ್ರಿಯಲ್ಲಿ ಕೈಯಲ್ಲಿ ಚೀಲವನ್ನು ಹಿಡಿದುಕೊಂಡು ಹೋಗುತ್ತಿದ್ದು, ಇದೇ ವೇಳೆ ದೀಪಕ್ನನ್ನು ತಾಯಿ ಪೂನಂ ಅವರನ್ನು ಹಿಂಬಾಲಿಸುತ್ತಿರುವುದು ಕಂಡುಬಂದಿದೆ.