ನವದೆಹಲಿ, ನ 28 (DaijiworldNews/HR): ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು 'ಛೋಟಾ ರೀಚಾರ್ಜ್' ಎಂದು ಸಂಸದ ಹಾಗೂ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಟೀಕೆ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, 'ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಮುಸ್ಲಿಮರನ್ನು ನಿಂದಿಸಿದ್ದು, ಪ್ರಧಾನಿ ಮೋದಿಯವರ ಎಲ್ಲಾ ದಾಖಲೆಗಳನ್ನು ಕೇಜ್ರಿವಾಲ್ ಮುರಿಯಲು ಹೊರಟಿದ್ದಾರೆ ಎಂದರು.
ಇನ್ನು ದೆಹಲಿಯಲ್ಲಿ ಗಲಭೆ ನಡೆದಾಗ ಕೇಜ್ರಿವಾಲ್ ನಾಪತ್ತೆಯಾಗಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಹೀನ್ಬಾಗ್ನಲ್ಲಿ ಪ್ರತಿಭಟನೆ ಮಾಡುತ್ತಿದ್ದವರ ವಿರುದ್ದ ಮಾತನಾಡಿದರು. ಕೊರೊನಾ ಸಮಯದಲ್ಲಿ ಆಕ್ಸಿಜನ್ ಹಾಗೂ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಕಷ್ಟಪಡುತ್ತಿರುವಾಗ, ತಬ್ಲೀಘಿಗಳಿಂದ ಕೊರೊನಾವೈರಸ್ ಹರಡಿತು ಎಂದು ವಿಷ ಉಗುಳಿದರ ಎಂದು ಓವೈಸಿ ವಾಗ್ದಾಳಿ ನಡೆಸಿದ್ದಾರೆ.