ಅಹಮದಾಬಾದ್, ನ. 29 (daijiworldews/HR): ಶ್ರದ್ದಾ ವಾಕರ್ ಹತ್ಯೆ ಮಾಡಿರುವ ಆಫ್ತಾಬ್ ಪೂನಾವಾಲಾ ಪ್ರಕರಣ ಲವ್ ಜಿಹಾದ್ ಅಲ್ಲ. ಹಾಗಾಗಿ ಈ ಪ್ರಕರಣಕ್ಕೆ ಧಾರ್ಮಿಕ ಕೋನ ನೀಡಬಾರದು ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಆಫ್ತಾಬ್ ಪ್ರಕರಣವನ್ನು ಮಹಿಳೆಯರ ಮೇಲಿನ ಶೋಷಣೆ ಮತ್ತು ದೌರ್ಜನ್ಯದ ಪ್ರಕರಣವೆಂದು ಪರಿಗಣಿಸಬೇಕು ಹಾಗೂ ಘಟನೆಯನ್ನು ಎಲ್ಲರೂ ಖಂಡಿಸಬೇಕು ಎಂದಿದ್ದಾರೆ.
ಇನ್ನು ಏಕರೂಪ ನಾಗರಿಕ ಸಂಹಿತೆ ಹಾಗೂ ಲವ್ ಜಿಹಾದ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ ಎಂದು ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಆಫ್ತಾಬ್ ಪ್ರಕರಣವನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಹಾಗೂ ಮತ ಬ್ಯಾಂಕ್ಗಾಗಿ ಹಿಂದೂ ಮತ್ತು ಮುಸ್ಲಿಂರ ನಡುವೆ ಕಂದಕ ಸೃಷ್ಟಿಸಬಾರದು ಎಂದು ಹೇಳಿದ್ದಾರೆ.