ನವದೆಹಲಿ, ನ. 29 (daijiworldews/HR): ಶ್ರದ್ದಾ ವಾಕರ್ ಹತ್ಯೆ ಪ್ರಕರಣ ಆರೋಪಿ ಅಫ್ತಾಬ್ ಪೂನಾವಾಲಾ ಕರೆದೊಯ್ಯುವ ವಾಹನದ ಮೇಲೆ ದಾಳಿ ನಡೆಸಿದ ಇಬ್ಬರನ್ನು ದೆಹಲಿ ನ್ಯಾಯಾಲಯವು ಮಂಗಳವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಆಯುಧ ಹಿಡಿದಿದ್ದ ಕುಲದೀಪ್ ಠಾಕೂರ್ ಮತ್ತು ನಿಗಮ್ ಗುರ್ಜರ್ ಅವರನ್ನು ಬಂಧಿಸಿರುವ ಪೊಲೀಸರು ಮಂಗಳವಾರ ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಇನ್ನು ರೋಹಿಣಿಯ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ಹೊರಗೆ ಪೂನಾವಾಲಾ ಇದ್ದ ವ್ಯಾನ್ ಅನ್ನು ಕಾರೊಂದು ಓವರ್ಟೇಕ್ ಮಾಡುವ ಮೂಲಕ ನಿಲ್ಲಿಸಿ ದಾಳಿ ನಡೆಸಿದ್ದಾರೆ.
ಈ ಸಂಬಂಧ ಪ್ರಶಾಂತ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 186, 353, 147, 148 ಮತ್ತು 149ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.