ಬೆಂಗಳೂರು, ನ 30 (DaijiworldNews/MS): ಕಳೆದ ಫೆಬ್ರವರಿಯಲ್ಲಿ ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ದುವರ್ತನೆ ತೋರಿರುವ ಆರೋಪದ ಹಿನ್ನಲೆಯಲ್ಲಿ ಕೆ ಎನ್ ಜಗದೀಶ್ ಕುಮಾರ್ ಅವರು ಬೇಷರತ್ ಕ್ಷಮೆಯಾಚಿಸಿರುವುದನ್ನು ಪರಿಗಣಿಸಿ್ ₹2 ಲಕ್ಷ ದಂಡ ವಿಧಿಸಿ ಅವರ ವಿರುದ್ಧದ ವನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ಕೈಬಿಟ್ಟಿದೆ.
ಬೆಂಗಳೂರಿನ ನ್ಯಾಯಾಲಯದ ಆವರಣದಲ್ಲಿ ದುರ್ವರ್ತನೆ, ಕಿರಿಕಿರಿ, ನ್ಯಾಯಾಲಯದ ಕಲಾಪಕ್ಕೆ ಅಡ್ಡಿ, ರಿಜಿಸ್ಟ್ರಾರ್ ಅವರ ವಿರುದ್ದ ಅಸಂಸದೀಯ ಪದ ಬಳಕೆ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರ ವಿರುದ್ದ ಕೆಟ್ಟ ಪದ ಬಳಕೆ ಮಾಡುವ ಮೂಲಕ ಸಂಸ್ಥೆಯ ಘನತೆಗೆ ಕುಂದು ಉಂಟು ಮಾಡಿದ ಆರೋಪದಲ್ಲಿ ಹೈಕೋರ್ಟ್ನ ಆಡಳಿತ ವಿಭಾಗದ ಮುಖ್ಯಸ್ಥರಾದ ಮುಖ್ಯ ನ್ಯಾಯಮೂರ್ತಿ ಅವರ ನಿರ್ದೇಶನದಂತೆ ರಿಜಿಸ್ಟ್ರಾರ್ ಜನರಲ್ ಅವರು ಕೆ ಎನ್ ಜಗದೀಶ್ಕುಮಾರ್ ಅಲಿಯಾಸ್ ಜಗದೀಶ್ ಮಹದೇವ್ ಅಲಿಯಾಸ್ ಜಗದೀಶ್ ಅವರ ವಿರುದ್ಧ ಸ್ವಯಂಪ್ರೇರಿತ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.
ಇದರ ವಿಚಾರಣೆಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
ನ್ಯಾಯಾಲದಲ್ಲಿ ಅನುಚಿತವಾಗಿ ನಡೆದುಕೊಂಡ ಹಿನ್ನೆಲೆಯಲ್ಲಿ ಅವರಿಗೆ 2 ಲಕ್ಷ ರೂ. ದಂಡ ವಿಧಿಸಿದ ನ್ಯಾಯಪೀಠ, 1 ಲಕ್ಷ ರೂ. ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ, 50 ಸಾವಿರ ರೂ. ವಕೀಲರ ಸಂಘದ ಗ್ರಂಥಾಲಯ ಅಭಿವೃದ್ಧಿಗೆ ಮತ್ತು 50 ಸಾವಿರ ರೂ. ಹೈಕೋರ್ಟ್ನ ಗುಮಾಸ್ತರ ಕ್ಷೇಮಾಭಿವೃದ್ಧಿ ಸಂಘಕ್ಕೆ ಮುಂದಿನ 2 ವಾರಗಳಲ್ಲಿ ಪಾವತಿಸಬೇಕು. ಹೈಕೋರ್ಟ್ ಆದೇಶ ಪಾಲಿಸಿದ ಬಗ್ಗೆ ಡಿ.16ರಂದು ನ್ಯಾಯಾಲಯಕ್ಕೆ ವಿವರಿಸಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು