ಮೈಸೂರು, ನ 30 (DaijiworldNews/MS): 'ದೇಶಕ್ಕೆ ಆರ್ಎಸ್ಎಸ್ ಸಂಘಟನೆಯ ಕೊಡುಗೆ ಏನು ಇಲ್ಲ' ಎಂದು ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಂದು ಟೀಕಿಸಿದ್ದಾರೆ.
ಮೈಸೂರಿನಲ್ಲಿ ಕುರುಬ ಸಂಘದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್ಎಸ್ಎಸ್ನವರಿಗೆ ಸಮಾಜದಲ್ಲಿ ಬದಲಾವಣೆ ಬೇಕಿಲ್ಲ. ದೇಶಕ್ಕೆ ಅವರಿಂದ ಕೊಡುಗೆ ಏನೂ ಇಲ್ಲ. ಆರ್ಎಸ್ಎಸ್ನ ಒಬ್ಬ ಸ್ವಾತಂತ್ರ್ಯ ಹೋರಾಟಗಾರರನ್ನ ತೋರಿಸಿ ಎಂದು ಆರ್ಎಸ್ಎಸ್ ವಿರುದ್ಧ ಮತ್ತೆ ತೀವ್ರ ವಾಗ್ದಾಳಿ ಮಾಡಿದ್ದಾರೆ.
ಸಾಮಾಜಿಕ ಅವ್ಯವಸ್ಥೆ ವಿರುದ್ಧ ಎಲ್ಲರೂ ಧ್ವನಿ ಎತ್ತಬೇಕು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸಂಗೊಳ್ಳಿ ರಾಯಣ್ಣ ದೇಶಭಕ್ತ. ಶೋಷಣೆ ಮಾಡಲು ಅಸಮಾನತೆ ಇರಬೇಕೆಂದು ಬಯಸುತ್ತಾರೆ. ಮುಸ್ಲಿಮರನ್ನು ಬೆದರು ಗೊಂಬೆಯಾಗಿಟ್ಟುಕೊಂಡು ದೇಶ ಇಬ್ಭಾಗ ಮಾಡಿದರು ಎಂದು ಹೇಳಿದ್ದಾರೆ.