ರಾಜಸ್ಥಾನ, ಡಿ 01 (DaijiworldNews/HR): ರಾಜಸ್ಥಾನದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ 1.90 ಕೋಟಿ ರೂ. ಮೊತ್ತದ ವಿಮಾ ಮೊತ್ತವನ್ನು ಪಡೆಯಲು ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಶಾಲು ಎಂಬ ಮಹಿಳೆ ತನ್ನ ಪತಿ ಮಹೇಶ್ ಚಂದ್ ಅವರ ಕೋರಿಕೆಯ ಮೇರೆಗೆ ಅಕ್ಟೋಬರ್ 5 ರಂದು ತನ್ನ ಸೋದರಸಂಬಂಧಿ ರಾಜು ಅವರೊಂದಿಗೆ ಬೈಕ್ನಲ್ಲಿ ದೇವಸ್ಥಾನಕ್ಕೆ ಹೋಗುತ್ತಿದ್ದು, ಇವರ ಬೈಕ್ಗೆ ಎಸ್ಯುವಿ ಡಿಕ್ಕಿ ಹೊಡೆದಿದೆ. ಪರಿಣಾಮ ಶಾಲು ಸ್ಥಳದಲ್ಲೇ ಮೃತಪಟ್ಟರೆ, ಆಕೆಯ ಸೋದರ ಸಂಬಂಧಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ.
ಇನ್ನು ಇದೊಂದು ರಸ್ತೆ ಅಪಘಾತದಂತೆ ಕಂಡುಬಂದಿದ್ದು, ಮೃತಳ ಕುಟುಂಬಸ್ಥರು ಅನುಮಾನಗೊಂಡು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪೊಲೀಸರ ತನಿಖೆ ವೇಳೆ ಚಂದ್ ತನ್ನ ಪತ್ನಿಯ ವಿಮೆ ಹಣಕ್ಕಾಗಿ ಹತ್ಯೆಗೆ ಸಂಚು ರೂಪಿಸಿದ್ದ. ಹೀಗಾಗಿ ಚಂದ್ ಇತರರೊಂದಿಗೆ ಸೇರಿ ಶಾಲು ಪ್ರಯಾಣಿಸುತ್ತಿದ್ದ ಬೈಕ್ಗೆ ಕಾರಿನಿಂದ ಗುದ್ದಿಸಿದ್ದಾರೆ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.