ನವದೆಹಲಿ, ಡಿ 01 (DaijiworldNews/DB): ಅಪರಾಧಿಗಳನ್ನು ಬಿಡುಗಡೆ ಮಾಡುವ ಸಂಬಂಧ ನಿರ್ಧಾರ ಕೈಗೊಳ್ಳಲು ಸೂಕ್ತ ಸರ್ಕಾರ ಗುಜರಾತ್ನಲ್ಲಿ ಇದೆ ಎಂಬ ಸುಪ್ರೀಂಕೋರ್ಟ್ ಅಭಿಪ್ರಾಯವು ಅಪರಾಧ ಪ್ರಕ್ರಿಯಾ ಸಂಹಿತೆಯ ನಿಬಂಧನೆಗಳಿಗೆ ವಿರುದ್ಧವಾಗಿದೆ ಎಂದು ಬಿಲ್ಕಿಸ್ ಬಾನು ಹೇಳಿದ್ದಾರೆ.
ಬಿಲ್ಕಿಸ್ ಬಾನು ಹೇಳಿಕೆ ಬಗ್ಗೆ ಮಾಧ್ಯಮವೊಂದು ಗುರುವಾರ ವರದಿ ಮಾಡಿದ್ದು, ಗುಜರಾತ್ ಸರ್ಕಾರಕ್ಕೆ ಅಪರಾಧಿಗಳ ಬಿಡುಗಡೆಯನ್ನು ನಿರ್ಧರಿಸುವ ಹಕ್ಕು ಇಲ್ಲ ಎಂದವರು ಹೇಳಿರುವುದಾಗಿ ತಿಳಿಸಿದೆ.
ಅಪರಾಧಿಗಳ ಜೀವಾವಧಿ ಶಿಕ್ಷೆಯನ್ನು ವಾಪಾಸ್ ತೆಗೆದುಕೊಳ್ಳುವ ಸಂಬಂಧ ನಿರ್ಧಾರ ಕೈಗೊಳ್ಳಲು ಮೇ ತಿಂಗಳಲ್ಲಿ ಗುಜರಾತ್ ಸರ್ಕಾರಕ್ಕೆ ಅವಕಾಶ ನೀಡಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ವಿರುದ್ದ ಬಿಲ್ಕಿಸ್ ಬಾನು ಬುಧವಾರ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯಲ್ಲಿ ಅವರು ಈ ಹೇಳಿಕೆಯನ್ನು ನೀಡಿದ್ದಾರೆಂದು ತಿಳಿದು ಬಂದಿದೆ.