ಬೆಂಗಳೂರು, ಡಿ 04 (DaijiworldNews/HR): ಸೋಲಿನ ಭೀತಿಯಲ್ಲಿರುವ ರಾಜ್ಯ ಬಿಜೆಪಿ ಬೀದಿ ರೌಡಿಗಳನ್ನು ಕಟ್ಟಿಕೊಂಡು ಚುನಾವಣೆ ಗೆಲ್ಲಲು ಹೊರಟಿರುವುದು, ಧರ್ಮ, ಸಂಸ್ಕೃತಿ ಬಗ್ಗೆ ಬೊಗಳೆ ಬಿಡುವ ಸಂಘ ಪರಿವಾರದ ನೈತಿಕ ಅಧಃಪತನವಲ್ಲದೆ ಮತ್ತೇನು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಗಣಿ ಲೂಟಿಕೋರ ರೌಡಿಗಳನ್ನು ಕಟ್ಟಿಕೊಂಡು ಅಧಿಕಾರಕ್ಕೆ ಬಂದಿದ್ದ ಬಿಜೆಪಿಯ ಮುಖ್ಯಮಂತ್ರಿಗಳು ಕೊನೆಗೆ ಜೈಲು ಪಾಲಾಗಬೇಕಾಯಿತು. ಈಗ ಹೊಸ ರೌಡಿ ಪಡೆ ಕಟ್ಟುತ್ತಿರುವುದು ಯಾರನ್ನು ಜೈಲಿಗೆ ಕಳುಹಿಸಲು ಎಂದು ಕೇಳಿದ್ದಾರೆ.
ಇನ್ನು ಬಾಯಿ ಬಿಟ್ಟರೆ ಸಂಸ್ಕೃತಿ, ಆಚಾರ, ವಿಚಾರದ ಮಂತ್ರ ಉದುರಿಸುವ ಆರೆಸ್ಸೆಸ್ ನಾಯಕರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕರೆಸಿಕೊಂಡಿದ್ದು ರೌಡಿ ಮೋರ್ಚಾ ಕಟ್ಟಲು ಸಲಹೆ ನೀಡಲಿಕ್ಕಾಗಿಯೇ? ಆರೆಸ್ಸೆಸ್ ಮೌನವು ಸಮ್ಮತಿಯ ಲಕ್ಷಣವೇ ಎಂದು ಪ್ರಶ್ನಿಸಿದ್ದಾರೆ.