ರಾಮನಗರ, ಡಿ 04 (Daijiwor ldNews/HR): ಬಿಜೆಪಿ ನಾಯಕರು ಹೇಳುವುದು ಒಂದಾದರೆ, ಮಾಡುವುದು ಇನ್ನೊಂದಾಗಿರುತ್ತದೆ. ಬಿಜೆಪಿಗೆ ಮುಂದೆ ಒಂದು ರೀತಿಯ ಮುಖ, ಹಿಂದೆ ಮತ್ತೊಂದು ರೀತಿಯ ಮುಖ ಇದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಪಕ್ಷಕ್ಕೆ ರೌಡಿ ಶೀಟರ್ಗಳ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರಕ್ಕಾಗಿ ಬಿಜೆಪಿಯವರು ಸುಳ್ಳು ಹೇಳಿ, ಸತ್ಯವನ್ನು ಮಾಚುತ್ತಿದ್ದು, ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂಬ ಕಾರಣಕ್ಕೆ ಯಾವುದನ್ನು ಏನು ಬೇಕಾದರೂ ಮಾಡುತ್ತಾರೆ ಎಂದರು.
ಇನ್ನು ಬಿಜೆಪಿ ರಾಷ್ಟ್ರೀಯ ನಾಯಕರಿಂದ ಕೆಳ ಹಂತದ ನಾಯಕರವರೆಗೂ ಎಲ್ಲರು ಸುಳ್ಳನ್ನು ಮನೆ ದೇವರು ಮಾಡಿಕೊಂಡಿದ್ದು, ಇವತ್ತು ಅಧಿಕಾರಕ್ಕಾಗಿ ಸಂಸ್ಕೃತಿಯ ಹೆಸರಿನಲ್ಲಿ ಎಲ್ಲಾ ರೀತಿಯ ತಂತ್ರಗಾರಿಕೆಯನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.