ಕಟ್ನಿ, ಡಿ 04 (DaijiworldNews/DB): ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗಲೇ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದಿದೆ.
ರಾಜೇಶ್ ಮೆಹಾನಿ ಮೃತ ವ್ಯಕ್ತಿ. ದೇವಸ್ಥಾನದಲ್ಲಿ ವಿಗ್ರಹದ ಬಳಿ ವ್ಯಕ್ತಿ ಪ್ರಾರ್ಥನೆಗೆಂದು ಕುಳಿತಿದ್ದು, 15 ನಿಮಿಷಗಳಿಗೂ ಹೆಚ್ಚು ಕಾಲ ಅಲ್ಲಿಂದ ಕದಲದೇ ಇದ್ದ ಕಾರಣ ಅರ್ಚಕರು ಅನುಮಾನಗೊಂಡು ಪರಿಶೀಲಿಸಿದ್ದಾರೆ. ಈ ವೇಳೆ ರಾಜೇಶ್ ಪ್ರಜ್ಞೆ ತಪ್ಪಿರುವುದು ಅವರ ಗಮನಕ್ಕೆ ಬಂದಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆ ವೇಳೆಗಾಗಲೇ ಮೃತಪಟ್ಟಿದ್ದರು.
ಮೃತ ರಾಜೇಶ್ ಮೆಡಿಕಲ್ ಸ್ಟೋರ್ ನಡೆಸುತ್ತಿದ್ದು, ಪ್ರತಿ ಗುರುವಾರ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು ಎನ್ನಲಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.