ಅಹಮದಾಬಾದ್, ಡಿ 05 (DaijiworldNews/HR): 'ಗುಜರಾತ್ ಚುನಾವಣೆಯಲ್ಲಿ ಮಹಿಳೆಯರಿಗೆ ಟಿಕೆಟ್ ಕೊಡಲಾಗಿದೆ. ಇಲ್ಲಿ ಪುರುಷರು ಉಳಿದಿಲ್ಲವೇ? ಈ ಬೆಳವಣಿಗೆ ನಮ್ಮ ಧರ್ಮವನ್ನು ದುರ್ಬಲಗೊಳಿಸುತ್ತದೆ ಎಂದು ಅಹಮದಾಬಾದ್ನ ಜಾಮಾ ಮಸೀದಿಯ ಮುಖ್ಯ ಧರ್ಮಗುರು ಶಬ್ಬೀರ್ ಅಹ್ಮದ್ ಸಿದ್ದಿಕಿ ಪ್ರಶ್ನಿಸಿದ್ದಾರೆ.
ಗುಜರಾತ್ನಲ್ಲಿ ಇಂದು ಎರಡನೇ ಹಾಗೂ ಅಂತಿಮ ಹಂತದ ಮತದಾನ ನಡೆಯುತ್ತಿದ್ದು, ಈ ವೇಳೆ ಮಾತನಾಡಿದ ಶಬ್ಬೀರ್ ಅಹ್ಮದ್ ಸಿದ್ದಿಕಿ, ಮುಸ್ಲಿಂ ಮಹಿಳೆಯರನ್ನು ಚುನಾವಣೆಗೆ ಸ್ಪರ್ಧಿಸಲು ಆಯ್ಕೆ ಮಾಡುವವರು ಇಸ್ಲಾಂ ಧರ್ಮದ ವಿರುದ್ಧ ಇದ್ದಾರೆ. ಅವರು ಧರ್ಮವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದಿದ್ದಾರೆ.
ಮಹಿಳೆಯರನ್ನು ಶಾಸಕರು ಮತ್ತು ಕೌನ್ಸಿಲರ್ಗಳನ್ನು ಮಾಡಿದರೆ, ನಾವು ಹಿಜಾಬ್ ಅನ್ನು ರಕ್ಷಿಸಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ.
ಇನ್ನು ಚುನಾವಣೆ ನಿಂತವರು ಜನರ ಮನೆ-ಮನೆಗೆ ಭೇಟಿ ಮಾಡಬೇಕು. ಆದ್ದರಿಂದ, ಮಹಿಳೆಯರಿಗೆ ಟಿಕೆಟ್ ನೀಡಿರುವುದನ್ನು ನಾನು ತೀವ್ರವಾಗಿ ವಿರೋಧಿಸುತ್ತೇನೆ ಎಂದಿದ್ದಾರೆ.