ಕೊಟ್ಟಿಗೆಹಾರ, ಡಿ 05 (DaijiworldNews/HR): ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾರ್ಮಿಕರ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಕಾರ್ಮಿಕ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಮೃತರನ್ನು ಜಾರ್ಖಂಡ್ ಮೂಲದ ಕಾರ್ಮಿಕ ದಿಬೋ ಶಂಕರ್ ನಾಯಕ್ (22 )ಎಂದು ಗುರುತಿಸಲಾಗಿದೆ.
ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ ಹೋಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಟರ್ ಟ್ಯಾಂಕರ್ ಪಲ್ಟಿಯಾಗಿದೆ.
ಇನ್ನು ಸ್ಥಳಕ್ಕೆ ಬಣಕಲ್ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ.