ನವದೆಹಲಿ, ಡಿ 06 (DaijiworldNews/HR): ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಧಿಸಿದಂತೆ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ಜಾಮೀನು ಮಂಜೂರು ಮಾಡುವಲ್ಲಿ ನ್ಯಾಯಾಧೀಶರು ಪಕ್ಷಪಾತ ತೋರಿದ್ದಾರೆ ಎಂದು 2018ರಲ್ಲಿ ಮಾಡಿದ ಆರೋಪಕ್ಕೆ ಚಲನಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ದೆಹಲಿ ಹೈಕೋರ್ಟ್ನಲ್ಲಿ ಬೇಷರತ್ ಕ್ಷಮೆಯಾಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಒರಿಸ್ಸಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿರುವ ನ್ಯಾಯಾಧೀಶರ ವಿರುದ್ಧ ತಮ್ಮ ಹೇಳಿಕೆಯನ್ನು ಹಿಂಪಡೆದು ಅಗ್ನಿಹೋತ್ರಿ ಅಫಿಡವಿಟ್ ಸಲ್ಲಿಸಿದ್ದಾರೆ.
ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಮತ್ತು ತಲ್ವಂತ್ ಸಿಂಗ್ ಅವರ ಪೀಠವು ಇದು ಸ್ವಯಂ ಮೋಟೋ ವಿಷಯವಾಗಿರುವುದರಿಂದ, ಮುಂದಿನ ವಿಚಾರಣೆಯ ದಿನಾಂಕ ಮಾರ್ಚ್ 16, 2023 ರಂದು ಅಗ್ನಿಹೋತ್ರಿ ನ್ಯಾಯಾಲಯದ ಮುಂದೆ ಹಾಜರಾಗಬೇಕಾಗುತ್ತದೆ ಎಂದು ಹೇಳಿದ್ದಾರೆ.
ಇನ್ನು 2018 ರಲ್ಲಿ ಭೀಮಾ ಕೋರೆಗಾಂವ್ ಹಿಂಸಾಚಾರದ ಆರೋಪಿ ಗೌತಮ್ ನವ್ಲಾಖಾ ವಿರುದ್ಧದ ಟ್ರಾನ್ಸಿಟ್ ರಿಮಾಂಡ್ ಆದೇಶವನ್ನು ರದ್ದುಗೊಳಿಸಿದ ತೀರ್ಪಿನ ವಿರುದ್ಧ ಎಸ್ ಗುರುಮೂರ್ತಿ ಅವರು ಬರೆದ ಲೇಖನವನ್ನು ಬೆಂಬಲಿಸಿ ಮಾಡಿದ ಟ್ವೀಟ್ಗಳಿಗೆ ಈ ವಿಷಯ ಸಂಬಂಧಿಸಿದೆ.