ಬೆಂಗಳೂರು, ಡಿ 06( DaijiworldNews/MS): ಗುಜರಾತ್ ಹಾಗು ಹಿಮಾಚಲ ಪ್ರದೇಶದ ಎಕ್ಸಿಟ್ ಪೋಲ್ ಕರ್ನಾಟಕಕ್ಕೆ ದಿಕ್ಸೂಚಿ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ ಯಾವುದೇ ಚುನಾವಣೆಯಲ್ಲಿ ಜನ ನೀಡುವ ತೀರ್ಪಿಗೆ ತಲೆಬಾಗಲೇ ಬೇಕು. ಒಂದು ರಾಜ್ಯದ ಚುನಾವಣೆಯೂ ಇನ್ನೊಂದು ರಾಜ್ಯಕ್ಕೆ ಸಂಬಂಧವಿರುವುದಿಲ್ಲ. ಅಲ್ಲಿನ ಸಮಸ್ಯೆ ಆಡಳಿತ, ಜನರ ಭಾವನೆಗಳು ಬೇರೆ ಬೇರೆಯಾಗಿರುತ್ತದೆ. ಆ ರೀತಿ ದಿಕ್ಸೂಚಿ ಆಗುವುದಾದರೆ ಪಂಜಾಬ್ ಗೆ ಏಕೆ ಆಗಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.
ಇನ್ನೊಂದೆಡೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗುಜರಾತ್ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ಗೆ ಬಹುಮತ ಬರಲಿದ್ದು ಕರ್ನಾಟಕದಲ್ಲಿಯೂ ಕೂಡ ಇದು ಒಳ್ಳೆಯ ಪರಿಣಾಮ ಬೀರಲಿದೆ. ನೂರಕ್ಕೆ ನೂರು 2023 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.