ಶಿವಮೊಗ್ಗ, ಡಿ 06 (DaijiworldNews/HR): ಸಿದ್ದರಾಮಯ್ಯನವರ ಪರಿಸ್ಥಿತಿ ನೋಡಿದ್ರೇ ಅವರಿಗೆ ಕ್ಷೇತ್ರವೇ ಇಲ್ಲದಂತಾಗಿದೆ. ಮಾರ್ಯಾದೆ ಉಳಿಸಿಕೊಳ್ಳಲು ರಾಜ್ಯದ ಯಾವುದೇ ಕ್ಷೇತ್ರ ಕೊಟ್ಟರೂ ನಿಲ್ಲಲು ಸಿದ್ಧನಿದ್ದೇನೆ ಎನ್ನುತ್ತಾರೆ ಸಿದ್ದರಾಮಯ್ಯನವರು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಚುನಾವಣಾ ಸಮೀಕ್ಷೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದಾಗಿ ಹೇಳಿತ್ತು, ಅದರಂತೆ ಇನ್ನು ಮುಂದಿನ ದಿನಗಳಲ್ಲಿ ಅಸೆಂಬ್ಲಿ, ಪಾರ್ಲಿಮೆಂಟ್ ಸೇರಿದಂತೆ ಯಾವುದೇ ಚುನಾವಣೆ ನಡೆದರೂ ಅದರಲ್ಲಿ ಗೆಲುವು ಬಿಜೆಪಿಯದ್ದೇ ಇರುತ್ತದೆ ಎಂದರು.
ಇನ್ನು ದೇಶದಲ್ಲಿ ಕಾಂಗ್ರೆಸ್ ಎಲ್ಲಿದೆ? ಹಾಗೋ ಹೀಗೋ ಕಾಂಗ್ರೆಸ್ ಕರ್ನಾಟಕದಲ್ಲಿತ್ತು. ರಾಜ್ಯದಲ್ಲಿ ಇಬ್ಬರು ಪೈಲ್ವಾನ್ ಗಳು ನಾಯಕತ್ವಕ್ಕಾಗಿ ಹೊಡೆದಾಡುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಕುರಿತು ವ್ಯಂಗ್ಯವಾಡಿದ್ದಾರೆ.