ನವದೆಹಲಿ, ಡಿ 7 (DaijiworldNews/HR): ಯಾರೂ ಹಸಿವಿನಿಂದ ಮಲಗಬಾರದು ಎಂಬುದು ನಮ್ಮ ಸಂಸ್ಕೃತಿ, ಹಾಗಾಗಿ ಆಹಾರ ಧಾನ್ಯಗಳು ಕೊನೆಯ ವ್ಯಕ್ತಿಯವರೆಗೂ ತಲುಪಿಸುವ ಜವಾಬ್ದಾರಿ ಸರ್ಕಾರದ್ದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಸ್ಎಫ್ಎಸ್) ಅಡಿಯಲ್ಲಿ ಆಹಾರ ಧಾನ್ಯಗಳು ಕೊನೆಯ ವ್ಯಕ್ತಿಯನ್ನು ತಲುಪುವುದನ್ನು ಖಚಿತಪಡಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.
ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಇಶ್ರಾಮ್ ಪೋರ್ಟಲ್ನಲ್ಲಿ ನೋಂದಾಯಿಸಿದ ವಲಸೆ ಮತ್ತು ಅಸಂಘಟಿತ ವಲಯದ ಕಾರ್ಮಿಕರ ಸಂಖ್ಯೆಯೊಂದಿಗೆ ಇತ್ತೀಚಿನ ಕೋಷ್ಟಕವನ್ನು ಸಲ್ಲಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿತು.
ಇನ್ನು ಎನ್ಎಫ್ಎಸ್ಎ ಅಡಿಯಲ್ಲಿ ಆಹಾರ ಧಾನ್ಯಗಳು ಕೊನೆಯ ವ್ಯಕ್ತಿಯನ್ನು ತಲುಪುವುದನ್ನು ಖಚಿತಪಡಿಸಿಕೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದ್ದು, ಕೇಂದ್ರವು ಏನನ್ನೂ ಮಾಡುತ್ತಿಲ್ಲ ಎಂದು ನಾವು ಹೇಳುತ್ತಿಲ್ಲ. ಕೋವಿಡ್ ಸಮಯದಲ್ಲಿ ಕೇಂದ್ರ ಸರ್ಕಾರವು ಜನರಿಗೆ ಆಹಾರ ಧಾನ್ಯಗಳನ್ನು ತಲುಪಿಸಿದೆ. ಇದು ಮುಂದುವರಿಯುವುದನ್ನು ನಾವು ಸಹ ನೋಡಬೇಕು ಎಂದು ಹೇಳಿದೆ.