ನವದೆಹಲಿ, ಡಿ 7 (DaijiworldNews/HR): ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಗೆದ್ದಿದ್ದು,'ಇದು ಗೆಲುವು ಮಾತ್ರವಲ್ಲ, ನಮಗೆ ಬಂದ ದೊಡ್ಡ ಜವಾಬ್ದಾರಿ' ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮೇಲೆ ನಂಬಿಕೆ ಇರಿಸಿದ ದೆಹಲಿಯ ಜನತೆಗೆ ಧನ್ಯವಾದಗಳು. ವಿಶ್ವದ ಅತಿ ದೊಡ್ಡ ಹಾಗೂ ಅತ್ಯಂತ್ಯ ಋಣಾತ್ಮಕವಾದ ಪಕ್ಷವನ್ನು ಮಣಿಸಿ, ನಂಬಿಕಸ್ಥ ಕೇಜ್ರಿವಾಲ್ ಅವರನ್ನು ಜನರು ಗೆಲ್ಲಿಸಿದ್ದಾರೆ ಎಂದಿದ್ದಾರೆ.
ಇನ್ನು ಇದೇ ಮೊದಲ ಬಾರಿಗೆ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಅಧಿಕಾರ ಹಿಡಿದಿದೆ. ಆ ಮೂಲಕ ಪಾಲಿಕೆಯಲ್ಲಿ 15 ವರ್ಷಗಳ ಬಿಜೆಪಿ ಪಾರುಪತ್ಯ ಅಂತ್ಯವಾಗಿದೆ.