ಬೆಂಗಳೂರು, ಡಿ 08( DaijiworldNews/MS): ಗುಜರಾತ್ ನಲ್ಲಿ ಕಾಂಗ್ರೆಸ್ ಸೋಲಿಸಲು ಆಮ್ ಆದ್ಮಿ ಪಾರ್ಟಿಗೆ ಬಿಜೆಪಿಯೇ ಫಂಡ್ ಮಾಡಿದೆ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಗುಜರಾತ್ ವಿಧಾನಸಭೆ ಚುಣಾವಣೆಯ ಫಲಿತಾಂಶದ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಗುಜರಾತ್ ನಲ್ಲಿ ಮತ ವಿಭಜನೆಯಿಂದ ಬಿಜೆಪಿ ಮುನ್ನಡೆ ಸಾಧಿಸಿದೆ . ಮಾತ್ರವಲ್ಲದೆ ಆಮ್ ಆದ್ಮಿ ಪಾರ್ಟಿಗೆ ಬಿಜೆಪಿಯೇ ಫಂಡ್ ಮಾಡಿದೆ ಎಂದು ಆರೋಪಿಸಿದ್ದಾರೆ.
ಗುಜರಾತ್ ಚುನಾವಣೆಯ ಫಲಿತಾಂಶ ಕರ್ನಾಟಕದ ಚುನಾವಣೆಯ ಮೇಲೆ ಪರಿಣಾಮ ಬೀರಲ್ಲ. ಅಲ್ಲಿನ ವಾತವರಣವೇ ಬೇರೆ ಇಲ್ಲಿನ ವಾತವಾರಣವೇ ಬೇರೆ. ಇಲ್ಲಿನ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಿರೋಧ ಪಕ್ಷವೂ ತುಂಬಾ ಸ್ಟ್ರಾಂಗ್ ಆಗಿದೆ. ಹೀಗಾಗಿ ಗುಜರಾತ್ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಲ್ಲ ಎಂದು ಹೇಳಿದ್ದಾರೆ.
ಇನ್ನು ಗುಜರಾತ್ ನಲ್ಲಿ 154 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಎಎಪಿ ೦೬ ಹಾಗೂ ಕಾಂಗ್ರೆಸ್ 17 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.