ನವದೆಹಲಿ, ಡಿ 08 (DaijiworldNews/DB): ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ಸತ್ಯಕ್ಕೆ ದೂರವಾದ ಸುದ್ದಿ ಹರಡಿದ ಆರೋಪದ ಮೇಲೆ ಎರಡು ದಿನಗಳ ಹಿಂದೆ ಬಂಧಿಸಲ್ಪಟ್ಟಿದ್ದ ಟಿಎಂಸಿ ನಾಯಕ ಸಾಕೇತ್ ಗೋಖಲೆ ಅವರಿಗೆ ಗುರುವಾರ ಜಾಮೀನು ಮಂಜೂರಾಗಿದೆ.
ನವೆಂಬರ್ನಲ್ಲಿ ಸಂಭವಿಸಿದ್ದ ಮೊರ್ಬಿ ಸೇತುವೆ ಕುಸಿತದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿಯಿಂದಾಗಿ ರಾಜ್ಯ ಸರ್ಕಾರಕ್ಕೆ 30 ಕೋಟಿ ರೂ. ವೆಚ್ಚವಾಗಿದೆ. ಇದು ಮೃತರಿಗೆ ನೀಡಿದ ಪರಿಹಾರದ ಆರು ಪಟ್ಟು ಹೆಚ್ಚು ಎಂಬುದಾಗಿ ಗೋಖಲೆ ಟ್ವೀಟ್ ಮಾಡಿ ಆರೋಪಿಸಿದ್ದರು. ಇನ್ನು ಗೋಖಲೆಯವರು ಸುಳ್ಳು ಆರೋಪ ಮಾಡಿದ್ದಾರೆ ಎಂದು ಅಹಮದಾಬಾದ್ ಸೈಬರ್ ಸೆಲ್ ಪೊಲೀಸರು ಅವರನ್ನು ಬಂಧಿಸಿದ್ದರು.
ಇದೀಗ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಈ ವಿಚಾರವನ್ನು ತೃಣಮೂಲ ಕಾಂಗ್ರೆಸ್ನ ರಾಜ್ಯಸಭಾ ಸಂಸದ ಡೆರೆಕ್ ಒ ಬ್ರೇನ್ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ.