ಬೆಂಗಳೂರು, ಡಿ 09 ( DaijiworldNews/MS): ಬಿಜೆಪಿಯ ರೌಡಿ ಮೋರ್ಚಾಗೆ ಕ್ರೈಮ್ ಸ್ಕೊರ್ ಮುಖ್ಯವಾಗಿದ್ದು, ಬಿಜೆಪಿಯಲ್ಲಿ ಸ್ಥಾನ ಪಡೆದುಕೊಳ್ಳಲು ರೌಡಿಗಳು ತಮ್ಮ ಕ್ರೈಮ್ ಸ್ಕೊರ್ ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ರಾಜ್ಯ ಘಟಕ "ರೌಡಿಗಳಿಗೆ ಬಿಜೆಪಿ ರಾಜಮರ್ಯಾದೆ ಕೊಡುತ್ತಿರುವಾಗ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಬಿಲ್ಡರ್ ಮೇಲೆ ಗುಂಡಿನ ದಾಳಿಯಾಗಿದೆ. ಸರ್ಕಾರದ ಬೆಂಬಲವಿದೆ ಎಂದು ತಿಳಿದಿದ್ದೇ ತಡ ಭೂಗತಲೋಕ ಮತ್ತೆ ಆಕ್ಟಿವ್ ಆಗಿದೆ. ಅರಗ ಜ್ಞಾನೇಂದ್ರ ಅವರೇ, ಭುಗತಲೋಕಕ್ಕೆ ಧೈರ್ಯ ಬಂದಿದ್ದು ನಿಮ್ಮಿಂದಲೇ ಅಲ್ಲವೇ? ಕಾನೂನು ಸುವ್ಯವಸ್ಥೆಯ ವೈಫಲ್ಯಕ್ಕೆ ಕನ್ನಡಿಯಲ್ಲವೇ" ಎಂದು ಕಿಚಾಯಿಸಿದೆ.
ಬಿಜೆಪಿ ರೌಡಿಗಳಿಗೆ ಮಣೆ ಹಾಕುತ್ತಿರುವುದರಿಂದಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿಯುತ್ತಿದೆ. ಇದಕ್ಕೆ ಬೆಂಗಳೂರಿನ ಶೂಟೌಟ್ ಘಟನೆಯೇ ಸಾಕ್ಷಿ. ಬಿಜೆಪಿಯಲ್ಲಿ ಸ್ಥಾನ ಪಡೆದುಕೊಳ್ಳಲು ರೌಡಿಗಳು ತಮ್ಮ ಕ್ರೈಮ್ ಸ್ಕೊರ್ ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ,
ಬಿಜೆಪಿಯ ರೌಡಿ ಮೋರ್ಚಾಗೆ ಕ್ರೈಮ್ ಸ್ಕೊರ್ ಮುಖ್ಯ ಅಲ್ಲವೇ ಎಂದು ಲೇವಡಿ ಮಾಡಿದೆ.