ಮುಂಬೈ, ಡಿ 09 ( DaijiworldNews/MS): "ಮಗಳನ್ನು ಕೊಂದು 35 ತುಂಡುಗಳಾಗಿ ಕತ್ತರಿಸಿದ ಅಫ್ತಾಬ್ ಪೂನಾವಾಲಾಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು", ಮೃತ ಶ್ರದ್ಧಾ ವಾಲ್ಕರ್ ಅವರ ತಂದೆ ವಿಕಾಸ್ ವಾಲ್ಕರ್ ಶುಕ್ರವಾರ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರೊಂದಿಗೆ ವಿಕಾಸ್ ವಾಲ್ಕರ್ ಅವರೊಂದಿಗೆ ಫಡ್ನವಿಸ್ ಮನೆಗೆ ತೆರಳಿದ್ದರು.
"ನನ್ನ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವಸೈ ಪೊಲೀಸರಿಂದಾಗಿ ನಾನು ಅನೇಕ ಸಮಸ್ಯೆಗಳನ್ನು ಎದುರಿಸಿದ್ದೇನೆ, ಅವರು ನನಗೆ ಸಹಾಯ ಮಾಡಿದ್ದರೆ ಇಂದು ನನ್ನ ಮಗಳು ಬದುಕುತ್ತಿದ್ದಳು" ಎಂದು ವಿಕಾಸ್ ವಾಕರ್ ಆರೋಪಿಸಿದ್ದಾರೆ.
ದೆಹಲಿ ಪೊಲೀಸರ ನೆರವಿನ ಬಗ್ಗೆ ಮಾತನಾಡಿದ ವಿಕಾಸ್, "ನಮಗೆ ನ್ಯಾಯ ಸಿಗುತ್ತದೆ ಎಂದು ದೆಹಲಿ ಪೊಲೀಸರು ಹಾಗೂ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೂಡ ನಮಗೆ ಭರವಸೆ ನೀಡಿದ್ದಾರೆ" ಎಂದು ಹೇಳಿದ್ದಾರೆ