ಮಹಾರಾಷ್ಟ್ರ, ಡಿ 09 (DaijiworldNews/DB): ಲವ್ ಜಿಹಾದ್ ಸಂಬಂಧ ಕಾನೂನು ತರುವ ಬಗ್ಗೆ ಸರ್ಕಾರ ಈವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇತರ ರಾಜ್ಯಗಳಲ್ಲಿರುವ ಕಾನೂನನ್ನು ಈ ನಿಟ್ಟಿನಲ್ಲಿ ಅಧ್ಯಯನ ಮಾಡಲಾಗುವುದು ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಫಡ್ನವೀಸ್, ಲವ್ ಜಿಹಾದ್ ತಡೆಯುವ ನಿಟ್ಟಿನಲ್ಲಿ ಬೇರೆ ರಾಜ್ಯಗಳಲ್ಲಿ ಕಾನೂನು ಯಾವ ರೀತಿ ಇದೆ ಎಂಬ ಬಗ್ಗೆ ಅಧ್ಯಯನ ನಡೆಸಲಾಗುವುದು. ರಾಜ್ಯದಲ್ಲಿ ಅದನ್ನು ಜಾರಿಗೊಳಿಸುವ ಸಂಬಂಧ ಈವರೆಗ ನಿರ್ಧಾರ ಮಾಡಿಲ್ಲ ಎಂದರು.
ಮಹಾರಾಷ್ಟ್ರ ಪೊಲೀಸರು ತನಗೆ ಸಹಾಯ ಮಾಡುತ್ತಿದ್ದರೆ ತನ್ನ ಮಗಳು ಬದುಕಿರುತ್ತಿದ್ದಳು ಎಂದು ದೆಹಲಿಯಲ್ಲಿ ಲಿವ್ ಇನ್ ಸಂಗಾತಿ ಅಫ್ತಾಬ್ ಅಮಿನ್ ಪೂನಾವಾಲನಿಮದ ಹತ್ಯೆಯಾದ ಶ್ರದ್ಧಾ ವಾಕರ್ ಅವರ ತಂದೆ ವಿಕಾಸ್ ವಾಕರ್ ಸುದ್ದಿಗೋಷ್ಠಿಯಲ್ಲಿ ಅಳಲು ತೋಡಿಕೊಂಡ ಬಳಿಕ ಫಡ್ನವೀಸ್ ಈ ಹೇಳಿಕೆ ನೀಡಿದ್ದಾರೆ.