ದೆಹಲಿ, ಡಿ 11 (DaijiworldNews/SM): ದೇಶದೆಲ್ಲೆಡೆ ಚಳಿಯ ಪ್ರಮಾಣವೂ ಕೂಡ ಹೆಚ್ಚಳವಾಗಿದ್ದು, ಮತ್ತೊಂದೆಡೆ ಮಾಂಡೌಸ್ ಚಂಡಮಾರುತ ಅಬ್ಬರಿಸುತ್ತಿದೆ. ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ವಿಮಾನ ಹಾರಾಟ ರದ್ದು ಮಾಡಲಾಗಿದೆ.
ತಮಿಳುನಾಡು ಮತ್ತು ಆಂಧ್ರದ ಕರಾವಳಿ ಪ್ರದೇಶಗಳಲ್ಲಿ ಮಳೆ ಬಿರುಸು ಪಡೆದುಕೊಂಡಿದೆ. ಪ್ರಸ್ತುತ, ಚೆಂಗಲ್ಪಟ್ಟು, ವಿಲ್ಲುಪುರಂ ಮತ್ತು ಕಾಂಚೀಪುರಂ ಮತ್ತು ಚೆನ್ನೈ ಭಾರೀ ಮಳೆಯ ಹಿಡಿತದಲ್ಲಿದೆ. ಚಂಡಮಾರುತದ ಪ್ರಭಾವಕ್ಕೆ ಕೊಡೈಕೆನಾಲ್ನ ಹಲವೆಡೆ ಮರಗಳು ಉರುಳಿ ರಸ್ತೆಗೆ ಬಿದ್ದಿವೆ. ಹವಾಮಾನ ವೈಪರೀತ್ಯದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಿಂದ ಹಲವು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದ್ದು, ಕರಾವಳಿ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಮತ್ತು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ತಡೆಯಲಾಗಿದೆ. ಇನ್ನು ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೂ ತಟ್ಟಿದೆ. ರಾಜ್ಯದ ಇವಿಧ ಭಾಗಗಳಲ್ಲೂ ಮಳೆಯಾಗುತ್ತಿದೆ.
ಗಮನಾರ್ಹವೆಂದರೆ ಪ್ರಸ್ತುತ ತಮಿಳುನಾಡಿನ 10 ಜಿಲ್ಲೆಗಳಲ್ಲಿ 12 ಎನ್ಡಿಆರ್ಎಫ್ ತಂಡಗಳನ್ನು ನಿಯೋಜಿಸಲಾಗಿದೆ. 2 ಸಬ್ ಇನ್ಸ್ಪೆಕ್ಟರ್ 24 ಪೊಲೀಸ್ ನಿಯೋಜನೆ ಹವಾಮಾನದ ಬಗ್ಗೆ ಮಾಹಿತಿ ನೀಡಿದ ಎನ್ಡಿಆರ್ಎಫ್ ಕಮಾಂಡರ್ ಮತ್ತು ಸಬ್ ಇನ್ಸ್ಪೆಕ್ಟರ್ ಸಂದೀಪ್ ಕುಮಾರ್ ಮಾಧ್ಯಮಗಳಿಗೆ 'ಮಾಂಡೌಸ್ ಚಂಡಮಾರುತವನ್ನು ಎದುರಿಸಲು ನಾವು ಸಂಪೂರ್ಣವಾಗಿ ಸಿದ್ಧರಿದ್ದೇವೆ, ನಮ್ಮ ಬಳಿ ಎಲ್ಲಾ ಉಪಕರಣಗಳಿವೆ ಎಂದು ತಿಳಿದುಬಂದಿದೆ.