ಬೆಳಗಾವಿ, ಡಿ12 ( DaijiworldNews/MS): ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು; ಇಲ್ಲವಾದರೆ ಮರಾಠಿ ಭಾಷೆಯಲ್ಲೇ ಸರ್ಕಾರಿ ದಾಖಲಾತಿ ನೀಡಬೇಕು ಎನ್ನುವ ನಾಡದ್ರೋಹಿ ನಿರ್ಣಯವನ್ನು ಕನ್ನಡದ ನೆಲದಲ್ಲೇ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಅಂಗೀಕರಿಸಿದ ವಿಚಾರ ಬೆಳಕಿಗೆ ಬಂದಿದೆ.
ಕನ್ನಡ ನಾಡಿನ ಬೆಳಗಾವಿಯ ಬೆಳಗುಂದಿಯಲ್ಲಿ ನಡೆದ ಈ ಸಮ್ಮೇಳನದಲ್ಲಿ, ಕೇಂದ್ರ ಸರ್ಕಾರ ಗಡಿ ವಿವಾದವನ್ನು ಇತ್ಯರ್ಥಪಡಿಸುವವರೆಗೆ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಸೂಚನೆ ನೀಡಬೇಕು ಎಂದ್ ನಿರ್ಣಯದಲ್ಲಿ ಆಗ್ರಹಿಸಲಾಗಿದೆ.
ಜತೆಗೆ ಮಹಾರಾಷ್ಟ್ರ ಸರ್ಕಾರಿ ಮರಾಠ ಸಾಹಿತ್ಯ ಸಮ್ಮೇಳನಕ್ಕೆ ಅನುದಾನವನ್ನು ನೀಡುವಂತೆ ಒತ್ತಾಯಿಸಿದೆ. ಮರಾಠಿಗರ ಈ ಉದ್ದಟತನದ ನಿರ್ಣಯಕ್ಕೆ ಕನ್ನಡ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.