ನವದೆಹಲಿ, ಡಿ 12 (DaijiworldNews/HR): ಸಂಸದರುಗಳು ಯಾರೊಬ್ಬರೂ ಯಾರ ಜಾತಿ, ಧರ್ಮವನ್ನು ಪ್ರಸ್ತಾಪಿಸಿ ಮಾತನಾಡಬಾರದು ಎಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.
ನಾನು ಕೆಳಜಾತಿಯವನೆಂಬ ಕಾರಣಕ್ಕೆ ಹಿಂದಿ ಭಾಷೆಯಲ್ಲಿನ ನನ್ನ ಪ್ರಾವಿಣ್ಯತೆಯ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಟೀಕೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಸಂಸದ ಎ.ಆರ್ ರೆಡ್ಡಿ ಸಂಸತ್ನಲ್ಲಿ ಆರೋಪಿಸಿರುವ ಹಿನ್ನೆಲೆಯಲ್ಲಿ ಓಂ ಬಿರ್ಲಾ ಅವರು ಸದಸ್ಯರಿಗೆ ಎಚ್ಚರಿಕೆ ನೀಡಿದ್ದಾರೆ.
ಇನ್ನು ಪ್ರಶ್ನೋತ್ತರ ವೇಳೆಯಲ್ಲಿ ಎ.ಆರ್ ರೆಡ್ಡಿ ತಮ್ಮ ಸಾಮಾಜಿಕ ವರ್ಗವನ್ನು ಉಲ್ಲೇಖಿಸಿ ಬಳಸಿದ ಪದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್, 'ಜನರು ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸದಸ್ಯರನ್ನು ಲೋಕಸಭೆಗೆ ಆಯ್ಕೆ ಮಾಡಿಲ್ಲ ಎಂದು ಹೇಳಿದ್ದಾರೆ.