ನವದೆಹಲಿ, ಡಿ.13 (DaijiworldNews/HR): ಭಾರತ-ಚೀನಾ ಘರ್ಷಣೆ ಬೆನ್ನಲ್ಲೇ ಭಾರತೀಯ ವಾಯುಪಡೆಯು ಅರುಣಾಚಲ ಪ್ರದೇಶದ ಮೇಲೆ ಸಕ್ರಿಯ ಯುದ್ಧ ಗಸ್ತು ಆರಂಭಿಸಿದೆ ಎಂದು ತಿಳಿದು ಬಂದಿದೆ.
ಕಳೆದ ವಾರ ಅರುಣಾಚಲ ಪ್ರದೇಶದ ನೈಜ ನಿಯಂತ್ರಣ ರೇಖೆಯಲ್ಲಿ ನಡೆದ ಭಾರತ-ಚೀನಾ ಗಡಿ ಘರ್ಷಣೆ ಹಿನ್ನೆಲೆ, ವಾಯುಪಡೆಯು ವಾಯು ಗಸ್ತು ಆರಂಭಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇನ್ನು ಕಳೆದ ವಾರ ಅರುಣಾಚಲ ಪ್ರದೇಶದ ಎಲ್ಎಸಿಯಲ್ಲಿ ಭಾರತ ಮತ್ತು ಚೀನಾದ ಸೈನಿಕರು ಘರ್ಷಣೆಗೆ ಒಳಗಾಗಿದ್ದರು ಎಂದು ನಿನ್ನೆ ಬಹಿರಂಗವಾಯಿತು.
ಈ ಘರ್ಷಣೆ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರನ್ನು ಇಂದು ಭೇಟಿಯಾಗಿ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.