ನವದೆಹಲಿ, ಡಿ.13 (DaijiworldNews/HR): ತನ್ನ ಕುಟುಂಬದ ಏಳು ಸದಸ್ಯರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದ 2002ರ ಪ್ರಕರಣದಲ್ಲಿ 11 ಅಪರಾಧಿಗಳನ್ನ ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೋ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಬೇಕಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರು ಇಂದು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ.
ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಬೇಲಾ ಎಂ ತ್ರಿವೇದಿ ಅವರ ಪೀಠವು ಈ ವಿಷಯವನ್ನು ವಿಚಾರಣೆಗೆ ಕೈಗೆತ್ತಿಕೊಂಡ ತಕ್ಷಣ, ನ್ಯಾಯಮೂರ್ತಿ ರಸ್ತೋಗಿ ಅವ್ರು ತಮ್ಮ ಸಹೋದರಿ ನ್ಯಾಯಾಧೀಶರು ಪ್ರಕರಣದ ವಿಚಾರಣೆ ನಡೆಸಲು ಇಷ್ಟಪಡುವುದಿಲ್ಲ ಎಂದರು.
ಇನ್ನು ನ್ಯಾಯಮೂರ್ತಿ ರಸ್ತೋಗಿ ನೇತೃತ್ವದ ನ್ಯಾಯಪೀಠವು,'ನಮ್ಮಲ್ಲಿ ಒಬ್ಬರು ಸದಸ್ಯರಲ್ಲದ ನ್ಯಾಯಪೀಠದ ಮುಂದೆ ಈ ವಿಷಯವನ್ನು ಪಟ್ಟಿ ಮಾಡಿ ಎಂದು ಆದೇಶಿಸಿತು. ನ್ಯಾಯಮೂರ್ತಿ ತ್ರಿವೇದಿ ಅವರ ಪದಚ್ಯುತಿಗೆ ಯಾವುದೇ ಕಾರಣವನ್ನು ನ್ಯಾಯಪೀಠವು ನಿರ್ದಿಷ್ಟಪಡಿಸಲಿಲ್ಲ.