ಬೆಂಗಳೂರು, ಡಿ 14 ( DaijiworldNews/MS): ಕೋಮುವಾದಿ ಶಕ್ತಿ ಮಣಿಸಲು ಹಾಗೂ ನನ್ನ ನಂಬಿ ಬಂದವರು ಅತಂತ್ರ ಆಗಬಾರದು ಅಲ್ಲದೆ ಅವರಿಗೊಂಡು ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ. ಆದರೆ ಈ ವಿಚಾರ ತಂದೆ ಸಮಾನರಾದ ದೇವೇಗೌಡರಿಗೆ ಈ ವಿಚಾರ ಹೇಳದೆ ಒದ್ದಾಡುತ್ತಿದ್ದೇನೆ ಎಂದು ಜೆಡಿಎಸ್ ಮಾಜಿ ಶಾಸಕ ವೈಎಸ್ವಿ ದತ್ತ ಹೇಳಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ಕುರಿತು ಮಾತನಾಡಿರುವ ಅವರು, ನಮ್ಮ ಕ್ಷೇತ್ರದ ಕೋಮುವಾದಿಗಳ ಜೊತೆ ಸೆಣಸಬೇಕು ಅಂದ್ರೆ ಕಾಂಗ್ರೆಸ್ ಸೇರಬೇಕು ಎಂಬುದು ನಮ್ಮ ಕಾರ್ಯಕರ್ತರು ಮತ್ತು ಕ್ಷೇತ್ರದ ಜನರ ಒತ್ತಾಯವಾಗಿದೆ. ಆದರೆ ನನ್ನ ಎಂಎಲ್ಸಿ ಮಾಡಿದ್ದು ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು. ಅವರ ಋಣ ನನ್ನ ಮೇಲೆ ಇದೆ. ಅದಕ್ಕಾಗಿ ನಾನು ತಳಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ. ನಾನು ದೇವೇಗೌಡರು ಇರುವವರೆಗೂ ಅವರ ಜೊತೆ ಇರುತ್ತೇನೆ ಎಂದು ಹೇಳಿದ್ದೆ. ಆದರೆ ಈಗ ಜನರು ಮತ್ತು ಕಾರ್ಯಕರ್ತರ ಒತ್ತಾಯ ಮೇಲೆ ಕಾಂಗ್ರೆಸ್ ಸೇರ್ಪಡೆಯಾಗಬೇಕಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಜ್ವಲ್ ಸಂಸದ ಸ್ಥಾನಕ್ಕೆ ಸ್ವರ್ಧೆ ಮಾಡಿದಾಗಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಇದ್ದರೂ ಕೂಡ ಬಿಜೆಪಿಗೆ ಹೆಚ್ಚು ಮತಗಳು ಬಂದಿದೆ. ಹೀಗಾಗಿ ಜನರು ಕೋಮುವಾದಿ ಶಕ್ತಿ ಮಣಿಸಲು ಕಾಂಗ್ರೆಸ್ ಸೇರ್ಪಡೆಯಾಗಬೇಕು ಎಂದು ಹೇಳಿದ್ದಾರೆ. ಕ್ಷೇತ್ರದ ಒಳಗಡೆ ಕೊನೆ ಹೋರಾಟ ಇದಾಗಿದ್ದು ನಾನು ಕ್ಷೇತ್ರ ಪೂರ್ತಿ ಸಂಚಾರ ಮಾಡುತ್ತಿದ್ದೇನೆ. ಅಲ್ಲಿನ ಜನರು ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಒತ್ತಾಯಿಸುತ್ತಿರುವ ಕಾರಣ ಈ ನಿರ್ಧಾರ ತಳೆದಿದ್ದೇನೀಂದು ಹೇಳಿದ್ದಾರೆ.