ಬೆಂಗಳೂರು, ಡಿ 15( DaijiworldNews/MS): ರಾಜ್ಯದಲ್ಲಿ 5 ಹಾಗೂ 8ನೇ ತರಗತಿಗೆ ನಿಗದಿಪಡಿಸಲಾಗಿದ್ದ ಪೂರಕ ಪರೀಕ್ಷೆಯನ್ನು ಶಿಕ್ಷಣ ಇಲಾಖೆ ಹಿಂಪಡೆದುಕೊಂಡಿದೆ.
ಈ ಹಿಂದೆ ನೀಡಿದ್ದ ಆದೇಶದ ಪ್ರಕಾರ ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಜೂನ್-ಜುಲೈ ತಿಂಗಳ ಅಂತ್ಯದಲ್ಲಿ ಪರಿಹಾರ ಬೋಧನೆ ಮಾಡಿ ಎರಡು ಪೂರಕ ಪರೀಕ್ಷೆಗಳನ್ನು ಶಾಲಾ ಹಂತದಲ್ಲೇ ನಡೆಸಲು ಸೂಚಿಸಲಾಗಿತ್ತು.
ಆದರೆ, ಸದ್ಯ ಪರೀಕ್ಷೆ ಬದಲಾಗಿ ಶಾಲಾ ಹಂತದಲ್ಲೇ ಅದೇ ಅವಧಿಯಲ್ಲಿ ಪರಿಹಾರ ಬೋಧನೆ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.