ಕೋಲ್ಕತ್ತ, ಡಿ 15 (DaijiworldNews/HR): ಬಂಗಾಳದ ಪಶ್ಚಿಮ ಬರ್ಧಮಾನ್ ಜಿಲ್ಲೆಯಲ್ಲಿ ಬ್ಲಾಂಕೆಟ್ ವಿತರಣೆ ವೇಳೆ ಕಾಲ್ತುಳಿತ ಉಂಟಾಗಿ 3 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಪಕ್ಷ ನಾಯಕ ಸುವೇಂದು ಅಧಿಕಾರಿ ಬ್ಲಾಂಕೆಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸುವೇಂದು ಅವರು ಸ್ಥಳದಿಂದ ತೆರಳುತ್ತಿದ್ದಂತೆಯೇ ಜನರು ವೇದಿಕೆಯತ್ತ ಧಾವಿಸಿದ ಪರಿಣಾಮ ಕಾಲ್ತುಳಿತ ಉಂಟಾಗಿದೆ.
ಇನ್ನು ಕಾರ್ಯಕ್ರಮದಲ್ಲಿ 5,000 ಮಂದಿ ಇದ್ದರು ಎಂದು ಟಿಎಂಸಿ ನಾಯಕ ಅಸಾನ್ಸೋಲ್ ಮೇಯರ್ ಬಿಧನ್ ಉಪಾಧ್ಯಾಯ ಹೇಳಿದ್ದಾರೆ.
ಕಾಲ್ತುಳಿತದಲ್ಲಿ 3 ಮಂದಿ ಸಾವನ್ನಪ್ಪಿ, 5 ಮಂದಿ ಗಾಯಗೊಂಡಿದ್ದಾರೆ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.