ನವದೆಹಲಿ, ಡಿ 15 (DaijiworldNews/HR): ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಚೋದನಕಾರಿ ಟ್ವೀಟ್ಗಳಿಂದಲೇ ಗಡಿ ವಿವಾದವು ಹಿಂಸಾರೂಪ ಪಡೆದುಕೊಂಡಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರಿದ್ದಾರೆ.
ಅಮಿತ್ ಶಾ ಅಧ್ಯಕ್ಷತೆಯಲ್ಲಿ ನಡೆದ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಶಿಂದೆ ಅವರು, ಬಸವರಾಜ ಬೊಮ್ಮಾಯಿ ಅವರು ಮಾಡಿದ ಪ್ರಚೋದನಕಾರಿ ಟ್ವೀಟ್ಗಳೇ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದಕ್ಕೆ ಕಾರಣ ಎಂದರು.
ಇನ್ನು ಗಡಿ ವಿವಾದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ಅಂತಿಮ ತೀರ್ಪು ನೀಡುವವರೆಗೆ ಯಾರೂ ಆರೋಪ-ಪ್ರತ್ಯಾರೋಪಗಳನ್ನು ಮಾಡಬಾರದು ಎಂಬುದಾಗಿ ಶಾ ತಿಳಿಸಿದ್ದಾರೆ.