ನವದೆಹಲಿ, ಡಿ 15 (DaijiworldNews/DB): ಶಾಲೆಗೆ ಹೋಗುತ್ತಿದ್ದ ಬಾಲಕಿ ಮೇಲೆ ಆ್ಯಸಿಡ್ ಎರಚಿದ ಘಟನೆ ಹೇಯವಾದುದು. ಆರೋಪಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ಸಂಸದ ಗೌತಮ್ ಗಂಭೀರ್ ಒತ್ತಾಯಿಸಿದ್ದಾರೆ.
ತನ್ನ ಸಹೋದರಿಯೊಂದಿಗೆ ಬುಧವಾರ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ 17 ವರ್ಷದ ಬಾಲಕಿ ಮೇಲೆ ಬಾಲಕನೊಬ್ಬ ಆ್ಯಸಿಡ್ ಎರಚಿದ ಪ್ರಕರಣಕ್ಕೆ ಸಂಬಂಧಿಸಿ ಟ್ವೀಟ್ ಮೂಲಕ ಖೇದ ವ್ಯಕ್ತಪಡಿಸಿದ ಅವರು, ಇಂತಹ ಅಪರಾಧ ಎಸಗುವವರಿಗೆ ಭಯ ಹುಟ್ಟು ಹಾಕಬೇಕಾದ ಅಗತ್ಯವಿದೆ. ಸಾರ್ವಜನಿಕವಾಗಿ ಆರೋಪಿಗಳನ್ನು ಗಲ್ಲಿಗೇರಿಸುವ ಮೂಲಕ ಅಂತಹ ಭಯ ನಿರ್ಮಾಣ ಸಾಧ್ಯ ಎಂದರು.
ಇನ್ನು ಬಾಲಕಿ ಮೇಲೆ ಆ್ಯಸಿಡ್ ಎರಚಿದ ಘಟನೆ ಕುರಿತು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.