ಸಾಗರ, ಡಿ 14 (DaijiworldNews/DB): ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆ ತಂದಿದ್ದ ಬಸ್ ಪಲ್ಟಿಯಾಗಿ ಐವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಸಾಗರದಲ್ಲಿ ಗುರುವಾರ ನಡೆದಿದೆ.
ತಾಲೂಕಿನ ತುಮರಿ ಬ್ಯಾಕೋಡು ಬಳಿ ವಕ್ಕೋಡಿ ತಿರುವಿನಲ್ಲಿ ಘಟನೆ ಸಂಭವಿಸಿದೆ. ಮೈಸೂರಿನ ಹುಣಸೂರು ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆಂದು ಸಾಗರಕ್ಕೆ ಕರೆ ತರಲಾಗುತ್ತಿತ್ತು.
ಐವರು ವಿದ್ಯಾರ್ಥಿಗಳಿಗೆ ಗಂಭೀರ ಲ ಗಾಯಗಳಾಗಿರುವ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಸಾಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.