ಕಾನ್ಪುರ, ಡಿ 15 (DaijiworldNews/HR): ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಉದ್ಯಮಿಯೊಬ್ಬರು ಸಾವಿಗೀಡಾಗಿದ್ದು ಘಟನೆಗೆ ಸಂಬಂಧಿಸಿದಂತೆ ಐವರು ಪೊಲೀಸರು ಹಾಗೂ ಓರ್ವ ವೈದ್ಯನ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.
ಬಲ್ವಂತ್ ಸಿಂಗ್ (27) ಎಂಬುವವರ ವಿರುದ್ಧ ಆತನ ಸಂಬಂಧಿ ಚಂದ್ರ ಭಾನ್ ಸಿಂಗ್ ಸುಲಿಗೆ ಪ್ರಕರಣ ದಾಖಲಿಸಿದ್ದು, ಈ ಕುರಿತು ವಿಚಾರಣೆಗೊಳಪಡಿಸಲು ಬಲ್ವಂತ್ ಸಿಂಗ್ ಅವರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದರು.
ಇನ್ನು ಮಂಗಳವಾರದಂದು ಬಲ್ವಂತ್ ಸಿಂಗ್ಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಮೃತಪಟ್ಟರು ಎಂದು ಬಲ್ವಂತ್ ಸಿಂಗ್ ಕುಟುಂಬದ ಸದಸ್ಯರಿಗೆ ಪೊಲೀಸರು ತಿಳಿಸಿದ್ದರು. ಆದರೆ ಪೊಲೀಸರ ಕ್ರೌರ್ಯಕ್ಕೆ ಆತ ಬಲಿಯಾಗಿದ್ದಾನೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.
ಘಟನೆಯ ಸಂಬಂಧ ಇಬ್ಬರು ಠಾಣಾಧಿಕಾರಿಗಳನ್ನು ಒಳಗೊಂಡಂತೆ ಹನ್ನೊಂದು ಮಂದಿ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿ