ಕುಷ್ಟಗಿ, ಡಿ 16 ( DaijiworldNews/MS): ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ , ಹೋದ ಕಡೆ ಎಲ್ಲಾ ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕುಷ್ಟಗಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, "ಅರ್ಜಿ ಹಾಕಿದವರಿಗೆ ನಮಗೂ ಟಿಕೆಟ್ ಸಿಗುತ್ತದೆ ಎಂಬ ಆಸೆ ಇರುತ್ತದೆ. ಇನ್ನು ಕೂಡಾ ಅರ್ಜಿಗಳ ಇತ್ಯರ್ಥವಾಗಿಲ್ಲ. ಹೀಗಾಗಿ ಇವರಿಗೆ ಮತ ಹಾಕಿ ಎನ್ನುವುದು ಸರಿಯಲ್ಲ" ಎಂದರು.
ಹಾಗಾದರೇ ಸಿದ್ದರಾಮಯ್ಯ ಹೆಸರು ಘೋಷಣೆ ಮಾಡಿದ್ದು ತಪ್ಪು ಎನ್ನುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸದ ಸತೀಶ ಜಾರಕಿಹೊಳಿ, ನಾನು ತಪ್ಪು ಅನ್ನಬೇಕು, ನೀವು ಅಲ್ಲಿ ಮತ್ತೇನಾದರೂ ಟ್ವಿಸ್ಟ್ ಮಾಡಿ ಕೇಳಬೇಕು. ಇದೆಲ್ಲ ಸರಿ ಇರಲ್ಲ ಎಂದರು.
ಬೆಳಗಾವಿ ಗಡಿ ವಿವಾದ ಬಗ್ಗೆ ಪ್ರತಿಕ್ರಿಯಿಸಿ ಈ ವಿಷಯ ವರ್ಷಕ್ಕೆ ಒಮ್ಮೆ ಮಳೆ ಬಂದ ಹಾಗೆ. ಚುನಾವಣೆ ಬಂದಾಗೆಲೆಲ್ಲ ಗಡಿ ವಿವಾದ ಹುಟ್ಟಿಕೊಳ್ಳುತ್ತದೆ ಎಂದು ಅಸಮಧಾನ ವ್ಯಕ್ತಪಡಿಸಿದರು.