ಮಂಡ್ಯ, ಡಿ. 15 (DaijiworldNews/SM): ಭಯೋತ್ಪಾದಕರನ್ನು ಬೆಂಬಲಿಸುವ ಕಾಂಗ್ರೆಸ್ ಪಕ್ಷದ ನಾಯಕರು ದೇಶದ್ರೋಹ ಪ್ರಕರಣದಲ್ಲಿ ಜೈಲಿಗೆ ಹೋಗಬೇಕಾದ ಪರಿಸ್ಥಿತಿ ಬರುತ್ತದೆ. ದೇಶದ ಸುರಕ್ಷತೆ ಬಗ್ಗೆ ಹಗುರವಾಗಿ ಮಾತನಾಡಿದರೆ ಬಿಜೆಪಿ ಎಂದಿಗೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.
ಡಾ. ಇಂದ್ರೇಶ್ ನೇತೃತ್ವದಲ್ಲಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕುಕ್ಕರ್ನಲ್ಲಿ ಅಕ್ಕಿ ಬೇಯಿಸುವುದನ್ನು ನೋಡಿದ್ದೇನೆ ಹೊರತು ಬಾಂಬ್ ಬೇಯಿಸುವುದನ್ನು ಎಂದೂ ನೋಡಿಲ್ಲ. ಕುಕ್ಕರ್ನಲ್ಲಿ ಬಾಂಬ್ ಇಟ್ಟು ಬ್ಲಾಸ್ಟ್ ಮಾಡಿದವರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಂಬಲಿಸುವ ಮೂಲಕ ಟೆರರಿಸ್ಟ್ಗಳ ಮೇಲೆ ಅನುಕಂಪ ತೋರಿಸುತ್ತಾರೆ ಎಂದರು.
ಇನ್ನು ಸಿದ್ದರಾಮಯ್ಯ ಅವರಿಗೆ ಧರ್ಮಾಂದ ಟಿಪ್ಪುವಿನ ಕನವರಿಕೆಯಾಗಿದೆ. ಕಾಂಗ್ರೆಸ್ನ ವರಿಷ್ಠ ನಾಯಕರಾದ ಸೋನಿಯಾ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷ ದೇಶದ ಪರವಾಗಿದ್ದಿಯೋ ಅಥವಾ ಭಯೋತ್ಪಾದಕರ ಪರವಾಗಿದ್ದಿಯೋ ಎಂದು ಸಪಷ್ಟಪಡಿಸಬೇಕು ಎಂದರು.