ಚಿಕ್ಕಮಗಳೂರು, ಡಿ 17 ( DaijiworldNews/MS): ದತ್ತಜಯಂತಿ ವೇಳೆ ದತ್ತಪೀಠದ ರಸ್ತೆಯಲ್ಲಿ ಮೊಳೆ ಹಾಕಿ ದುಷ್ಕೃತ್ಯ ನಡಸಲು ಮುಂದಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೊಳೆಗಳನ್ನು ಚೆಲ್ಲಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಬಂದಿಸಿದ್ದು ಉಳಿದವರು ತಲೆಮರೆಸಿಕೊಂಡಿದ್ದು ಶೋಧ ಕಾರ್ಯ ನಡೆದಿದೆ ಎಂದು ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.
ಬಂಧಿತ ಇಬ್ಬರು ಆರೋಪಿಗಳು ಚಿಕ್ಕಮಗಳೂರಿನ ದುಬೈ ನಗರ ನಿವಾಸಿಗಳಾದ ಮಹಮದ್ ಶಹಬಾಸ್, ವಾಹೀದ್ ಹುಸೇನ್ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳು ಹಾರ್ಡ್ವೇರ್ ಶಾಪ್ನಲ್ಲಿ 4 ಕೆಜಿ ತೂಕದ ಮೊಳೆಗಳನ್ನು ಖರೀದಿಸಿದ್ದರು ಎನ್ನಲಾಗಿದೆ.ದತ್ತಜಯಂತಿಯ ಮೊದಲ ದಿನದಂದು ಮಹಿಳಾ ಭಕ್ತರು ಪೀಠಕ್ಕೆ ಹೋಗುವ ಮಾರ್ಗದಲ್ಲಿ ಆರೋಪಿಗಳು ಮೊಳೆ ಚೆಲ್ಲಿದ್ದರು. ಪರಿಣಾಮ ಪೊಲೀಸರ ವಾಹನಗಳು ಸೇರಿದಂತೆ ಸುಮಾರು ನಾಲ್ಕೈದು ಗಾಡಿಗಳು ಪಂಚರ್ ಆಗಿ ರಸ್ತೆ ಮಧ್ಯೆ ನಿಂತಿದ್ದವು.