ನವದೆಹಲಿ, ಡಿ 17 (DaijiworldNews/HR): ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮಿತ್ ಪೂನಾವಾಲನ ಅರ್ಜಿ ವಿಚಾರಣೆಯನ್ನು ನ್ಯಾಯಾಲಯವು ಡಿಸೆಂಬರ್ 22 ಕ್ಕೆ ಮುಂದೂಡಿದೆ.
ಆರೋಪಿ ಅಫ್ತಾಬ್ ನನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ವೃಂದಾ ಕುಮಾರಿ ಎದುರು ಹಾಜರುಪಡಿಸಲಾಗಿದ್ದು, ಮೊದಲು ವಕೀಲರು ನನ್ನೊಂದಿಗೆ ಮಾತನಾಡಲು ಮತ್ತು ನಂತರ ಜಾಮೀನು ಅರ್ಜಿಯನ್ನು ಹಿಂಪಡೆಯಲು ನಾನು ಬಯಸುತ್ತೇನೆ ಎಂದು ಪೂನಾವಾಲಾ ಅವರು ಅರ್ಜಿಯನ್ನು ಹಿಂತೆಗೆದುಕೊಳ್ಳುವ ಉದ್ದೇಶವನ್ನು ಹೊಂದಿದ್ದಾರೆಯೇ ಎಂಬ ಬಗ್ಗೆ ನ್ಯಾಯಾಧೀಶರ ಪ್ರಶ್ನೆಗೆ ಉತ್ತರಿಸಿದರು.
ಇನ್ನು ಜಾಮೀನು ಅರ್ಜಿಯನ್ನು ಬಾಕಿ ಇರಿಸಲಾಗುವುದು ಮತ್ತು ಆರೋಪಿ ವಕೀಲರನ್ನು ಭೇಟಿಯಾದ ನಂತರವೇ ಮನವಿಯನ್ನು ಇರಿಸಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.