ಮುಂಬೈ, ಡಿ. 18 (DaijiworldNews/SM): ತಾವು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರಾಗಿರುವವರೆಗೆ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿಯಾಗಬೇಕು ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಅವರು ಭಾನುವಾರ ಹೇಳಿದ್ದಾರೆ.
ಸದ್ಯ ಕ್ಯಾಬಿನೆಟ್ ಸಚಿವರಾಗಿರುವ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರು ಫಡ್ನವಿಸ್ ಬದಲಿಗೆ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಪಕ್ಷ ಭಾರವಾದ ಹೃದಯದಿಂದ ನಿರ್ಧರಿಸಿದೆ ಎಂದು ಹೇಳಿದ ತಿಂಗಳುಗಳ ನಂತರ ಬವಾಂಕುಲೆ ಅವರು ಈ ಹೇಳಿಕೆ ನೀಡಿದ್ದಾರೆ