ಬೆಳಗಾವಿ, ಡಿ 20 (DaijiworldNews/SM): ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲು ಸದನ ತೀರ್ಮಾನಿಸಿದೆ. ಅದರಂತೆ ನಾಳೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಖಂಡನಾ ನಿರ್ಣಯವನ್ನು ಉಭಯ ಸದನಗಳಲ್ಲಿ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.
ಮಹಾರಾಷ್ಟ್ರ, ಕೇರಳ ಹಾಗೂ ಕರ್ನಾಟಕ ಗಡಿ ವಿಚಾರವಾಗಿ ನಿಳುವಳಿ ಸೂಚನೆ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರ ಹಾಗೂ ಅವರ ನಡೆ ವಿರುದ್ಧ ಉಭಯ ಸದನ ಮೂಲಕ ಖಂಡನಾ ನಿರ್ಣಯ ಮಂಡಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು, ಇದಕ್ಕೆ ಎಲ್ಲಾ ಸದಸ್ಯರ ಒಪ್ಪಿಗೆ ವಿಧಾನಸಭೆಯಲ್ಲಿ ದೊರಕಿದ್ದು, ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿರ್ಣಯ ಪಾಸ್ ಮಾಡಿ ಪಾಠ ಕಲಿಸೋಣ ಎನ್ನುವ ಮೂಲಕ ಶಾಸಕರ ಒಗ್ಗಟ್ಟು ಪ್ರದರ್ಶನ ಮಾಡಲಾಯಿತು.