ನವದೆಹಲಿ, ಡಿ 21 (DaijiworldNews/DB): ಭಾರತ್ ಜೋಡೋ ಯಾತ್ರೆಗೆ ಸಿಗುತ್ತಿರುವ ಜನಬೆಂಬಲ ನೋಡಿ ಬಿಜೆಪಿಗೆ ನಡುಕ ಉಂಟಾಗಿದೆ. ಹೀಗಾಗಿ ಯಾತ್ರೆಗೆ ಅಡ್ಡಿ ಪಡಿಸಲು ಕೋವಿಡ್ ನೆಪ ಹೇಳುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಬುಧವಾರ ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಗುಜರಾತ್ ಚುನಾವಣೆ ವೇಳೆ ಮನೆಮನೆಗೆ ಮತ ಕೇಳಲು ಹೋದಾಗ ಪ್ರಧಾನಿ ನರೇಂದ್ರ ಮೋದಿಯವರು ಮಾಸ್ಕ್ ಧರಿಸಿದ್ದರೇ? ಕೋವಿಡ್ ನಿಯಮಗಳನ್ನು ಪಾಲಿಸಿದ್ದರೇ? ಎಂದು ಪ್ರಶ್ನಿಸಿದ್ದಾರೆ.
ಭಾರತ್ ಜೋಡೋ ಯಾತ್ರೆ ವೇಳೆ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ, ಇಲ್ಲದಿದ್ದಲ್ಲಿ ಯಾತ್ರೆಯನ್ನು ರದ್ದುಗೊಳಿಸಿ ಎಂದು ಕೇಂದ್ರ ಸರ್ಕಾರ ಕಾಂಗ್ರೆಸ್ಗೆ ಸೂಚಿಸಿತ್ತು. ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ರಾಹುಲ್ ಗಾಂಧಯವರಿಗೆ ಪತ್ರ ಬರೆದಿದ್ದರು.