ಮುಂಬೈ, ಡಿ 21 ( DaijiworldNews/MS): ಮಹಾರಾಷ್ಟ್ರ ಮಾಜಿ ಸಚಿವ ಸಂಜಯ್ ರಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ' ಭಾರತಕ್ಕೆ ಚೀನಾ ಪ್ರವೇಶಿಸಿದಂತೆ, ನಾವೂ ಕರ್ನಾಟಕಕ್ಕೆ ನುಗ್ಗುತ್ತೇವೆ. ಅದಕ್ಕೆ ನಮಗೆ ಯಾವ ಪರ್ಮಿಷನ್ ಬೇಕಿಲ್ಲʼ ಎಂದು ಉದ್ದಟತನ ಪ್ರದರ್ಶಿಸಿದ್ದಾರೆ.
'ಈ ಗಡಿ ವಿವಾದ ಮಾತುಕತೆ ಮೂಲಕ ಬಗೆಹರಿಸಲು ನಾವು ಬಯಸಿದ್ದು ಕರ್ನಾಟಕದ ಸಿಎಂ 'ಬೆಂಕಿ'ಯೊಂದಿಗೆ ಆಟವಾಡುತ್ತಿದ್ದಾರೆ. ಚೀನಾ ಪ್ರವೇಶಿಸಿದಂತೆ... ನಾವು (ಕರ್ನಾಟಕ) ಪ್ರವೇಶಿಸುತ್ತೇವೆ. ನಮಗೆ ಯಾರ ಅನುಮತಿಯೂ ಅಗತ್ಯವಿಲ್ಲ, ನಾವು ವಿವಾದವನ್ನು ಚರ್ಚೆಯ ಮೂಲಕ ಪರಿಹರಿಸಲು ಬಯಸುತ್ತೇವೆ. ಆದರೆ ಕರ್ನಾಟಕದ ಸಿಎಂ ಬೆಂಕಿ ಹೊತ್ತಿಸುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ದುರ್ಬಲ ಸರ್ಕಾರವಿದ್ದುಅದು ಈ ವಿಚಾರದಲ್ಲಿ ಯಾವುದೇ ಸ್ಪಷ್ಟ ನಿಲುವು ತೆಗೆದುಕೊಳ್ಳುತ್ತಿಲ್ಲ ಎಂದು ಎಂದಿರುವುದು ಕನ್ನಡಿಗರನ್ನು ಕೆರಳಿಸಿದೆ .
ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ವಿವಾದದ ವಿಚಾರಣೆ ಸದ್ಯ ಸುಪ್ರೀಂಕೋರ್ಟ್ನಲ್ಲಿ ಬಾಕಿ ಇದೆ. ದಶಕಗಳಷ್ಟು ಹಳೆಯದಾದ ಗಡಿ ಸಂಘರ್ಷದ ಕುರಿತು ಉಭಯ ರಾಜ್ಯಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಸಮಯದಲ್ಲೇ ಮಹಾರಾಷ್ಟ್ರ ರಾಜಕೀಯ ನಾಯಕ ಇಂಥ ಹೇಳಿಕೆ ನೀಡಿದ್ದಾರೆ.